ಪ್ರಶಾಂತ್ ಕಿಶೋರ್ ರಾಜ್ಯ ಕಾಂಗ್ರೆಸ್ ನಾಯಕರ ಭೇಟಿ ಕುರಿತ ವರದಿಗೆ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದು ಹೀಗೆ...

Update: 2021-11-26 16:06 GMT

ಬೆಂಗಳೂರು: ಮೇಘಾಲಯದಲ್ಲಿ ಕಾಂಗ್ರೆಸ್ ನ 12 ಶಾಸಕರು ಟಿಎಂಸಿ ಸೇರಿರುವ ಬೆನ್ನಲ್ಲೇ ಇದೀಗ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಟಿಎಂಸಿ ನಾಯಕ ಪ್ರಶಾಂತ್ ಕಿಶೋರ್ ಸಭೆ ನಡೆಸಿದ್ದಾರೆನ್ನಲಾದ ವರದಿಯೊಂದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿತ್ತು. 

ಗೋವಾ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿರುವ ಟಿಎಂಸಿ, ರಾಜ್ಯದಲ್ಲೂ ಕಾಂಗ್ರೆಸ್ ನ ಕೆಲವು ನಾಯಕರನ್ನು ಭೇಟಿ ಮಾಡಿದ್ದಾರೆ ಎಂಬ ವರದಿ ಸಾಕಷ್ಟು ಕುತೂಹಲ ಮೂಡಿಸಿದ್ದು, ''ಈ ವರದಿಯು ಸಂಪೂರ್ಣವಾಗಿ ಆಧಾರರಹಿತ ಮತ್ತು ಕಾಲ್ಪನಿಕವಾಗಿದೆ. ವರದಿಯಲ್ಲಿ ಸ್ವಲ್ಪವೂ ಸತ್ಯವಿಲ್ಲ'' ಎಂದು ಈ ಕುರಿತು ಮಾಜಿ ಸಚಿವ ಎಂ.ಬಿ ಪಾಟೀಲ್ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News