ಕಾಪು: ರೈಲು ಢಿಕ್ಕಿ ಹೊಡೆದು ಓರ್ವ ಮೃತ್ಯು

Update: 2021-11-26 16:28 GMT

ಕಾಪು, ನ.26: ಚಲಿಸುತ್ತಿದ್ದ ರೈಲೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.26ರಂದು ಬೆಳಗ್ಗೆ ಮಲ್ಲಾರು ಗ್ರಾಮದ ಕುರ್ತ್ತಿಮಾರು ಉರ್ದು ಶಾಲೆಯ ಹತ್ತಿರ ನಡೆದಿದೆ.

ಮೃತರನ್ನು ಪಕೀರಣಕಟ್ಟೆಯ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಝಾಕ್(48) ಎಂದು ಗುರುತಿಸಲಾಗಿದೆ.

ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಬ್ದುಲ್ ರಝಾಕ್ ರಿಗೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ರೈಲು ಆಕಸ್ಮಿಕವಾಗಿ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲಿಯೇ ಮೃತ ಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News