ಮುನ್ನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸಂವಿಧಾನ ದಿನ ಆಚರಣೆ
Update: 2021-11-27 03:07 GMT
ಮಂಗಳೂರು : ಮುನ್ನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸಂವಿಧಾನ ದಿನಾಚರಣೆಯನ್ನು ಸಂವಿಧಾನದ ಆಶಯವನ್ನು ಬೋಧಿಸುವ ಮೂಲಕ ಆಚರಿಸಲಾಯಿತು.
ಗ್ರಾಮ ಪಂಚಾಯತ್ ಲೆಕ್ಕ ಸಹಾಯಕರಾದ ರಾಧಾ ಎ. ಅವರು ಸಂವಿಧಾನದ ಪೀಠಿಕೆಯನ್ನು ಭೋದಿಸಿದರು.
ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಲ್ಫ್ರೆಡ್ ಡಿ ಸೋಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾಜೀವ್ ನಾಯ್ಕ್ , ಗುತ್ತಿಗೆದಾರ ನಿಸಾರ್ ಅಹ್ಮದ್ ಎಸ್.ಎ., ಬ್ಯಾರಿ ಬರಹಗಾರರು ಮತ್ತು ಲೇಖಕರ ಸಂಘದ ಅಧ್ಯಕ್ಷ ಮನ್ಸೂರ್ ಅಹ್ಮದ್ ಸಾಮಣಿಗೆ, ಗ್ರಾಮ ಪಂಚಾಯತ್ ಬಿಲ್ ಕಲೆಕ್ಟರ್ ಕಮಾಲಾಕ್ಷ , ಗುಮಾಸ್ತ ನೆವಿಲ್ ಡಿ ಸೋಜ, ಸಿಬ್ಬಂದಿಗಳಾದ ಮಮತಾ ಕುಲಾಲ್ , ಧನರಾಜ್, ಸುಜಾತ, ಸಾವಿತ್ರಿ ಮುಂತಾದವರು ಉಪಸ್ಥಿತರಿದ್ದರು.