ಅಳೇಕಲ: ಮದನಿ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನ ಆಚರಣೆ

Update: 2021-11-27 03:36 GMT

ಉಳ್ಳಾಲ, ನ.27: ಅಳೇಕಲದ ಮದನಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಸಂವಿಧಾನ ದಿನವನ್ನು ಆಚರಿಸಲಾಯಿತು.

ಸಂಸ್ಥೆಯ ಭೂಗೋಳ ಶಾಸ್ತ್ರ ಉಪನ್ಯಾಸಕ ಬಾಲಕೃಷ್ಣ ಸಂವಿಧಾನ ದಿನದ ಮಹತ್ವದ ಕುರಿತು ಮಾತನಾಡಿದರು. ಶಾರೀರಿಕ ಶಿಕ್ಷಣ ಉಪನ್ಯಾಸಕ ಮುಹಮ್ಮದ್ ಅಶ್ರಫ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರಾಂಶುಪಾಲ ಇಸ್ಮಾಯೀಲ್ ಟಿ. ಅಧ್ಯಕ್ಷತೆ ವಹಿಸಿದ್ದರು.

ವಾಣಿಜ್ಯ ಶಾಸ್ತ್ರ ಉಪನ್ಯಾಸಕ ಮುಹಮ್ಮದ್ ಫಾಝಿಲ್ ಸ್ವಾಗತಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಅಬ್ದುಲ್ ಅಝೀಝ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News