ಗೋಳಿತೊಟ್ಟು: ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು: ಇಲಿಜ್ವರದ ಶಂಕೆ
Update: 2021-11-27 08:20 GMT
ಉಪ್ಪಿನಂಗಡಿ, ನ.27: ಜ್ವರದಿಂದ ಬಳಲುತ್ತಿದ್ದ ಗೋಳಿತೊಟ್ಟಿನ ಯುವಕನೋರ್ವ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆತನಿಗೆ ಇಲಿ ಜ್ವರ ಬಂದಿರುವ ಶಂಕೆ ವ್ಯಕ್ತವಾಗಿದೆ.
ಗೋಳಿತೊಟ್ಟು ಗ್ರಾಮದ ಡೆಬ್ಬೇಲಿ ನಿವಾಸಿ ಮಹೇಶ್ (27) ಮೃತ ಯುವಕ. ಇವರು ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದರೆನ್ನಲಾಗಿದೆ. ಬಳಿಕ ಜ್ವರ ಉಲ್ಬಣಗೊಂಡ ಕಾರಣ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಳ್ಳದ ಕಾರಣ ಅವರನ್ನು ನ.26ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.