ಬಿಜೆಪಿ ಸೇರ್ಪಡೆಗೊಂಡ ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ

Update: 2021-11-27 09:55 GMT

ಕೋಲಾರ: ಕೋಲಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ, ಕೆ.ಜಿ.ಎಫ್ ವಿಧಾನಸಭಾ ಕ್ಷೇತ್ರದ ಶ್ರೀನಿವಾಸ್, ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಕಪಾಲಿ ಶಂಕರ್ ಮತ್ತಿತರ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಡಾ.ಕೆ.ಸುಧಾಕರ್, ಸಚಿವ ಮುನಿರತ್ನ, ಕೋಲಾರ ಸಂಸದ ಎಸ್. ಮುನಿಸ್ವಾಮಿ ನೇತೃತ್ವದಲ್ಲಿ ಸೇರ್ಪಡೆ ಆಗಿದ್ದಾರೆ. 

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಮಂಜುನಾಥ್ ಗೌಡ, ವೆಂಕಟ ಮುನಿಯಪ್ಪ, ಕೋಲಾರ ಬಿಜೆಪಿ ಜಿಲ್ಲಾಧ್ಯಕ್ಷರೂ ಆದ ವಿಧಾನ ಪರಿಷತ್ ಅಭ್ಯರ್ಥಿ ಡಾ. ಕೆ ವೇಣುಗೋಪಾಲ್, ಜಿಲ್ಲಾ ಪಂಚಾಯಿತಿ ಸದಸ್ಯರುಗಳಾದ ಮಹೇಶ್, ಶ್ರೀನಿವಾಸ, ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ನಾಗೇಶ್, ಹನುಮಂತಪ್ಪ ಹಾಗೂ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News