ಬಂಟ್ವಾಳ; ಅಪಘಾತ ಸ್ಥಳದಲ್ಲಿ ಹೊಯಿಕೈ: ನಾಲ್ವರು ಪೊಲೀಸ್ ವಶಕ್ಕೆ

Update: 2021-11-27 15:09 GMT

ಬಂಟ್ವಾಳ, ನ. 27: ಎರಡು ವಾಹನಗಳ ನಡುವೆ ಢಿಕ್ಕಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಹೊಯಿಕೈ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಬಂಟ್ವಾಳ ಬಾರೆಕಾಡು ನಿವಾಸಿ ಇರ್ಷಾದ್, ಬಾರೆಕಾಡು ಶಾಹಿಲ್ ಮತ್ತು ಬಂಟ್ವಾಳ ನಿವಾಸಿಗಳಾದ ಧನುಷ್ ಆಚಾರ್ಯ, ಕೀರ್ತನ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ ಕಸಬಾ ಗ್ರಾಮದ ಜಂಕ್ಷನ್ ಬಳಿ ಬೈಕ್ ಮತ್ತು ಆಟೋ ರಿಕ್ಷಾಕ್ಕೆ ಅಪಘಾತ ಉಂಟಾದ ಕಾರಣಕ್ಕೆ ಸ್ಥಳಕ್ಕೆ ಬಂದ ಸ್ಥಳೀಯ ಯುವಕರು ಮತ್ತು ಆಟೋ ರಿಕ್ಷಾ ಸಂಬಂಧಿಗಳು ಒಬ್ಬರಿಗೊಬ್ಬರು ಗಲಾಟೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ನಾಲ್ಕು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News