ಭಟ್ಕಳ : ಕಾರು ಢಿಕ್ಕಿ; ಬೈಕ್ ಸವಾರನಿಗೆ ಗಾಯ

Update: 2021-11-27 15:11 GMT

ಭಟ್ಕಳ: ಜಾಲಿ ಕ್ರಾಸ್ ಸಮೀಪ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರವಾಗಿ ಗಾಯ ಗೊಂಡಿರುವ ಘಟನೆ ನಡೆದಿದೆ.

ಗಂಭೀರವಾಗಿ ಗಾಯಗೊಂಡ ಬೈಕ ಸವಾರನ್ನು ತಿಮ್ಮಪ್ಪ ಮೊಗೇರ(36)  ಶಿರಾಲಿ ಅಳ್ವೆಕೋಡಿ ನಿವಾಸಿ ಎಂದು ತಿಳಿದು ಬಂದಿದೆ. ಈತ ಶಿರಾಲಿ ಕಡೆಯಿಂದ ಭಟ್ಕಳದ ಕಡೆಗೆ ಬೈಕ್ ನಲ್ಲಿ ತೇರಳುತ್ತಿದ್ದ ವೇಳೆ ಭಟ್ಕಳ ಕಡೆಯಿಂದ ಶಿರಾಲಿ ಕಡೆ ಹೋಗುತ್ತಿದ್ದ ಕೇರಳ ಮೂಲದ ಕಾರೊಂದು ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. 

ಬೈಕ್ ಸವಾರನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ  ಸಾಗಿಸಲಾಗಿದೆ. ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News