ಪುತ್ತೂರು: ಕೌನ್ಸಿಲ್ ಗೆ ಕರೆತಂದ ವಿದ್ಯಾರ್ಥಿಗಳ ಮನೆಗೆ ತಲುಪಿಸಿದ ಪೊಲೀಸರು

Update: 2021-11-27 16:52 GMT

ಪುತ್ತೂರು: ಕೊಂಬೆಟ್ಟು ಕಾಲೇಜ್ ನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ  ಕೌನ್ಸಿಲ್ ಗಾಗಿ ಮಹಿಳಾ ಪೊಲೀಸ್ ಠಾಣೆಗೆ  ಕರೆದೊಯ್ದರೆನ್ನಲಾದ ವಿದ್ಯಾರ್ಥಿಗಳನ್ನು ಪೊಲೀಸರು ವಿದ್ಯಾರ್ಥಿಗಳ ಮನೆಗೆ ತಲುಪಿಸಿದ್ದಾರೆ ಎಂದು ತಿಳಿದು ಬಂದಿದೆ. 

ಕೊಂಬೆಟ್ಟು ಕಾಲೇಜ್ ನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ 7 ಮಂದಿ ಸಂಘರ್ಷಕ್ಕೆ ಒಳಗಾದ ಅಪ್ರಾಪ್ತ ವಿದ್ಯಾರ್ಥಿಗಳನ್ನು  ಶುಕ್ರವಾರ ಮಹಿಳಾ ಪೊಲೀಸ್ ಠಾಣೆಯ ಮಕ್ಕಳ ಮತ್ತು ಮಹಿಳೆಯರ ಆಪ್ತ ಸಮಾಲೋಚನಾ ಆಸರೆ ಎಂಬ ವಿಭಾಗಕ್ಕೆ ನಗರ ಪೊಲೀಸ್ ಠಾಣೆಯ ಪೊಲೀಸರು ಕರೆತಂದಿದ್ದರು.

ಆಸರೆಯಲ್ಲಿ ವಿದ್ಯಾರ್ಥಿಗಳ ಮನಪರಿವರ್ತನೆ ಕಾರ್ಯ ನಡೆಸಿದ ಬಳಿಕ ಅವರನ್ನು ಅವರವರ ಮನೆಗೆ ಪೊಲೀಸರು ವಾಹನದಲ್ಲಿ ಸುರಕ್ಷಿತವಾಗಿ ತಲುಪಿಸಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News