ಚಾಮರಾಜನಗರ: ಅಂತರಾಜ್ಯ ಗಡಿಯಲ್ಲಿ ಕಟ್ಟೆಚ್ಚರ

Update: 2021-11-27 17:16 GMT

ಚಾಮರಾಜನಗರ: ಕೇರಳ ರಾಜ್ಯದಲ್ಲಿ ನ್ಯೂರೊ ವೈರಸ್ ಕಾಣಿಸಿಕೊಂಡಿದ್ದರಿಂದ ಕೇರಳ ಗಡಿಗೆ ಹೊಂದಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಮೂಲೆಹೊಳೆ ಚಕ್ ಪೋಸ್ಟ್ ನಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ.

ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮೂಲೆಹೊಳೆ ಚಕ್ ಪೋಸ್ಟ್ ಮೂಲಕ ಕೇರಳದಿಂದ ಬರುವ ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡಲಾಗುತ್ತಿದೆ. ಕೋವಿಡ್ ಸೊಂಕು ಹಾಗೂ ನ್ಯೂರೊ ವೈರಸ್ ಲಕ್ಷಣ ಕಂಡು ಬಂದಲ್ಲಿ ಅಂತಹವರನ್ನು ಕೂಡಲೇ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕ್ರಮ ವಹಿಸಿದೆ.

ಈಗಾಗಲೇ ಗುಂಡ್ಲುಪೇಟೆ ಪಟ್ಟಣದಲ್ಲಿರುವ ನಿಫಾ ವೈರಸ್ ಸೋಂಕಿತರ ಚಿಕಿತ್ಸಾ ಕೊಠಡಿಯಲ್ಲಿ ನ್ಯೂರೊ ವೈರಸ್ ಸೋಂಕಿತರಿಗೂ ಚಿಕಿತ್ಸೆ ನೀಡಲು ಐದು ಹಾಸಿಗೆಯನ್ನು ಸಿದ್ದಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವಿಶ್ವೇಶ್ವರಯ್ಯ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News