ಬೆಂಗಳೂರು: ಮುನವ್ವರ್ ಫಾರೂಕಿ ಕಾರ್ಯಕ್ರಮ ರದ್ದುಗೊಳಿಸಲು ಪೊಲೀಸರ ಸೂಚನೆ

Update: 2021-11-28 08:00 GMT
file photo (Munawar Faruqui)

ಬೆಂಗಳೂರು, ನ.28: ಕಾಮಿಡಿಯನ್ ಮುನವ್ವರ್ ಫಾರೂಕಿ ಅವರ ಇಂದು ಬೆಂಗಳೂರಿನಲ್ಲಿ ಆಯೋಜನೆಗೊಂಡಿರುವ  ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಆಯೋಜಕರಿಗೆ ನಗರ ಪೊಲೀಸರು ಸೂಚನೆ ನೀಡಿದ್ದಾರೆಂದು ವರದಿಯಾಗಿದೆ.

ಹಿಂದೂ ಜನಜಾಗೃತಿ ಸಮಿತಿಯ ಪ್ರಮುಖರು,  ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಮುನವ್ವರ್  ಫಾರೂಕಿ ಅವರ ಬೆಂಗಳೂರು ಕಾರ್ಯಕ್ರಮ ರದ್ದುಗೊಳಿಸುವಂತೆ  ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದರು. 

ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಕರಿಗೆ ಪತ್ರ ಬರೆದಿರುವ ಅಶೋಕ ನಗರ ಪೊಲೀಸರು ಕಾರ್ಯಕ್ರಮವನ್ನು ರದ್ದು ಮಾಡುವಂತೆ ಹೇಳಿರುವುದಾಗಿ ತಿಳಿದು ಬಂದಿದೆ. 

ಇದು ಗಲಭೆಯನ್ನು ಸೃಷ್ಟಿಸಬಹುದು ಮತ್ತು ಸಾರ್ವಜನಿಕ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಬಹುದು ಮತ್ತು ಇದು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗಬಹುದು. ಹೀಗಾಗಿ ಫಾರೂಕಿ ಅವರ ಹಾಸ್ಯ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಪೊಲೀಸರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ‌.

ಗುಜರಾತ್ ಮೂಲದ ಹಾಸ್ಯಗಾರ ಮುನವ್ವರ್ ಫಾರೂಖಿ ಡೊಂಗ್ರಿ ಟು ನೋವೇರ್ ಹೆಸರಿನಲ್ಲಿ ಬೆಂಗಳೂರಿನಲ್ಲಿ ನ. 28ರ ಸಂಜೆ ಗುಡ್ ಶೇಪೆರ್ಡ್ ಸಭಾಂಗಣದಲ್ಲಿ ಕಾರ್ಯಕ್ರಮ ನಿಯೋಜನೆಯಾಗಿದೆ.


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News