ತೊಕ್ಕೊಟ್ಟು: ನ. 29ರಂದು ಪ್ರವಾದಿ ಅಭಿಯಾನದ ಪ್ರಯುಕ್ತ ವಿಚಾರಗೋಷ್ಠಿ

Update: 2021-11-28 07:17 GMT

ತೊಕ್ಕೊಟ್ಟು: ಯುನಿವೆಫ್ ಕರ್ನಾಟಕ "ಮಾನವೀಯ ಮೌಲ್ಯಗಳು, ಪರಧರ್ಮ ಸಹಿಷ್ಣುತೆ ಮತ್ತು ಪ್ರವಾದಿ ಮುಹಮ್ಮದ್ (ಸ)" ಎಂಬ ಕೇಂದ್ರೀಯ ವಿಷಯದಲ್ಲಿ ನ. 5 ರಿಂದ 2022ರ ಜ. 7ರ ವರೆಗೆ ಹಮ್ಮಿಕೊಂಡಿರುವ "ಅರಿಯಿರಿ ಮನುಕುಲದ ಪ್ರವಾದಿಯನ್ನು" ಅಭಿಯಾನದ ಪ್ರಯುಕ್ತ ನ.29ರ ಸಂಜೆ 6.45ಕ್ಕೆ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ರಂಗಮಂಟಪದಲ್ಲಿ "ಮಾನವೀಯ ಮೌಲ್ಯಗಳು, ಪರಧರ್ಮ ಸಹಿಷ್ಣುತೆ ಮತ್ತು ಪ್ರವಾದಿ ಮುಹಮ್ಮದ್ (ಸ)" ಎಂಬ ವಿಷಯದಲ್ಲಿ  ವಿಚಾರಗೋಷ್ಠಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪತ್ರಕರ್ತ ಶ್ರೀ ತಾರಾನಾಥ ಕಾಪಿಕಾಡ್ ಮತ್ತು  ಸಂತ ಸೆಬಾಸ್ಟಿಯನ್ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯಾನ್ ಪಿಂಟೋ ಭಾಗವಹಿಸಲಿದ್ದಾರೆ.

ಯುನಿವೆಫ್ ಅಧ್ಯಕ್ಷ ರಫೀಉದ್ದೀನ್ ಕುದ್ರೋಳಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಯುನಿವೆಫ್ ಉಳ್ಳಾಲ ಶಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News