ಪ್ರಚೋದನಕಾರಿ ಭಾಷಣ ಮಾಡಿದ ಆರೋಪ: ಅರುಣ್ ಕುಮಾರ್ ಪುತ್ತಿಲ, ಹಿಂಜಾವೇ ವಿರುದ್ಧ ಪ್ರಕರಣ ದಾಖಲು

Update: 2021-11-28 10:26 GMT
ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಸಂಘ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಹಿಂದೂ ಜಾಗರಣ ವೇದಿಕೆ ಸಂಘಟಕರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲ ಮತ್ತು ಚಿನ್ಮಯ್ ಎಂಬವರು ಘಟನೆಗೆ ಕೆಲ ದಿನಗಳ ಹಿಂದೆ ವಿದ್ಯಾರ್ಥಿಗಳ ಸಭೆ ನಡೆಸಿ ಅಲ್ಲಿ ಮಾಡಿದ ಪ್ರಚೋದನಕಾರಿ ಭಾಷಣ ಕಾರಣ ಎಂದು ಸಿಎಫ್ಐ ಮತ್ತಿತರ ಕೆಲವು ಸಂಘಟನೆಗಳು ಆರೋಪಿಸಿದ್ದವು.

ಇದೀಗ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ನಡುವಿನ ಹೊಡೆದಾಟದ ಹಿನ್ನೆಲೆಯಲ್ಲಿ ಪುತ್ತೂರಿನ ನಟರಾಜ ವೇದಿಕೆಯಲ್ಲಿ  ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಪ್ರಚೋದನಕಾರಿ ಭಾಷಣ ಮಾಡಿರುವುದಾಗಿ ಆರೋಪಿಸಿ ಉಮರ್ ಎಂಬವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News