ಕೆಎಸ್ಸಾರ್ಟಿಸಿ ಬಸ್- ಬೈಕ್‍ ಢಿಕ್ಕಿ: ಯುವಕ ಮೃತ್ಯು

Update: 2021-11-28 11:09 GMT

ಬೆಂಗಳೂರು, ನ. 28: ಕೆಎಸ್ಸಾರ್ಟಿಸಿ ಬಸ್ ಬೈಕ್‍ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಇಲ್ಲಿನ ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರವಿವಾರ ಹೆಬ್ಬಾಳದ ಕೊಡಿಗೆಹಳ್ಳಿ ವೃತ್ತದ ಬಳಿ ಈ ಘಟನೆ ನಡೆದಿದ್ದು, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಕಿರಣ್(26) ಮೃತಪಟ್ಟವರು ಎಂದು ಪೊಲೀಸರು ಹೇಳಿದ್ದಾರೆ. 

ಕೊಡಿಗೇಹಳ್ಳಿ ಜಂಕ್ಷನ್ ಕಡೆಯಿಂದ ಬ್ಯಾಟರಾಯನಪುರ ಕಡೆಗೆ ಹೋಗಲು ಬಿಬಿ ರಸ್ತೆಯ ಸ್ವಾತಿ ಹೋಟೆಲ್ ಮುಂಭಾಗ ಬೆಳಗ್ಗೆ ಬೈಕ್‍ನಲ್ಲಿ ಕಿರಣ್ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ. 
ಇದರ ಪರಿಣಾಮ ವಾಹನ ಸಮೇತ ರಸ್ತೆಗೆ ಬಿದ್ದ ಕಿರಣ್ ತಲೆಯ ಮೇಲೆ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News