ಬೆಳ್ತಂಗಡಿ : ನದಿಯಲ್ಲಿ ಮುಳುಗಿ ಯುವಕ ಮೃತ್ಯು

Update: 2021-11-28 13:28 GMT

ಬೆಳ್ತಂಗಡಿ :  ನಡ ಗ್ರಾಮದ ಕುತ್ರೊಟ್ಟು ನದಿಯಲ್ಲಿ ಮೂವರು ಗೆಳೆಯರ ಜೊತೆ ಸ್ನಾನ ಮಾಡಲು ಹೋಗಿದ್ದ ಯುವಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.

ಲಾಯಿಲ ಗ್ರಾಮದ ಕಾಶಿಬೆಟ್ಟು ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ನಬಾನ್(22) ಮೃತ ಯುವಕ ಎಂದು ಗುರುತಿಸಲಾಗಿದೆ.

ನದಿಯಲ್ಲಿ ಮುಳುಗಿದ್ದ ನಬಾನ್ ನನ್ನು ಸ್ಥಳೀಯರ ಸಹಾಯದಿಂದ ಮೇಲೆ ತಂದು ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. 

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News