ಕುಣಿಗಲ್: ಹಳ್ಳದ ನೀರಿನಲ್ಲಿ ಆಟವಾಡುತ್ತಿದ್ದ ನಾಲ್ವರು ನಾಪತ್ತೆ

Update: 2021-11-28 17:23 GMT

ಕುಣಿಗಲ್: ಮಾರ್ಕೋನಹಳ್ಳಿ ಕೋಡಿ ಹಳ್ಳದ ನೀರಿನಲ್ಲಿ ಆಟವಾಡಲು ಹೋದ ನಾಲ್ವರು ಕೊಚ್ಚಿ ಹೋದ ದುರಂತ ಘಟನೆ ರವಿವಾರ ನಡೆದಿದೆ.

ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದ ಪರ್ವಿನ್ ತಾಜ್ ( 23) ,  ಸಾದೀಯ (17) ಎಡಿಯೂರು ಹೋಬಳಿ ಬೀರಗಾನಹಳ್ಳಿ ಗ್ರಾಮದ ರಾಜು (23),  ಅಪ್ಪು (20) ನೀರಿನಲ್ಲಿ ಕೊಚ್ಚಿಹೋದವರು ಎಂದು ತಿಳಿದು ಬಂದಿದೆ.

ಘಟನೆ ವಿವರ : ಮಾಕೋರ್ನಹಳ್ಳಿ ಜಲಾಶಯವು ತುಂಬಿಕೊಂಡಿರುವ ಹಿನ್ನಲೆಯಲ್ಲಿ ಜಲಾಶಯಕ್ಕೆ ಪ್ರವಾಸಿಗರು ಹೆಚ್ಚಾಗುತ್ತಿದ್ದು, ರವಿವಾರ ರಜೆ ಇದ್ದ ಹಿನ್ನಲೆಯಲ್ಲಿ ಕೋಟೆ ಪ್ರದೇಶದ ಎರಡು ಕುಟುಂಬಗಳು ಜಲಾಶಯಕ್ಕೆ ಬಂದು ಮಾರ್ಕೋನಹಳ್ಳಿ ಬಲಭಾಗದ  ಕೋಡಿ ಹಳ್ಳದಲ್ಲಿ ಆಟವಾಡುತ್ತಿದ್ದರು.

ಆಟವಾಡುತ್ತಾ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಧಿಡೀರನೇ ಮಾರ್ಕೋನಹಳ್ಳಿ ಜಲಾಶಯಕ್ಕೆ ಎರಡು ಸಾವಿರ ಕ್ಯೂಸೆಕ್ಸ್ ಒಳ ಹರಿವು  ಹೆಚ್ಚಾಗಿ,ಕೋಡಿ ಸೈಪೋನ್ ನಲ್ಲಿ ನೀರಿನ ಪ್ರಮಾಣ ಹೆಚ್ಚಾದ ಹಿನ್ನಲೆಯಲ್ಲಿ ನಾಲ್ವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಮೃತ ದೇಹಗಳ ಪತ್ತೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News