ಉಡುಪಿ: ಮಕ್ಕಳ, ರಸ್ತೆ ಸುರಕ್ಷತೆ ಕುರಿತು ಶಾಲಾ ಮುಖ್ಯಸ್ಥರ ಸಭೆ

Update: 2021-11-28 16:29 GMT

ಉಡುಪಿ, ನ.28: ಮಕ್ಕಳ, ರಸ್ತೆ ಸುರಕ್ಷತೆಯ ದೃಷ್ಟಿಯಿಂದ ಉಡುಪಿ ನಗರ ವ್ಯಾಪ್ತಿಯ ಶಾಲಾ-ಕಾಲೇಜು ಮುಖ್ಯಸ್ಥರ ಸಭೆ ಶನಿವಾರ ಉಡುಪಿ ಪೊಲೀಸ್ ಉಪವಿಭಾಗ ಕಚೇರಿಯಲ್ಲಿ ನಡೆಯಿತು.

ಸಭೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸಲಹೆ- ಸೂಚನೆಗಳನ್ನು ನೀಡಲಾಯಿತು. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಸಿಸಿ ಕ್ಯಾಮರಾ ಅಳವಡಿಸುವಂತೆ ತಿಳಿಸಲಾಯಿತು. ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಉಡುಪಿ ಡಿವೈಎಸ್ಪಿ ಸುಧಾಕರ್ ಎಸ್.ನಾಯ್ಕಿ, ಉಡುಪಿ ಸಂಚಾರ ಪೊಲೀಸ್ ಠಾಣೆಯ ಎಸ್ಸೈ ಅಬ್ದುಲ್ ಖಾದರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News