ಸಾಲ ಯೋಜನೆಗಾಗಿ ಅರ್ಜಿ ಆಹ್ವಾನ

Update: 2021-11-29 14:49 GMT

ಮಂಗಳೂರು, ನ.29: ರಾಜ್ಯ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ಸವಿತಾ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ 2021-22ನೇ ಸಾಲಿನಲ್ಲಿ ಸಾಂಪ್ರದಾುಕ ವೃತ್ತಿದಾರರ ಹಾಗೂ ಸ್ವಯಂ ಉದ್ಯೋಗ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸೌಲಭ್ಯ ಪಡೆಯ ಬಯಸುವವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ. ಮತ್ತು ಪಟ್ಟಣ ಪ್ರದೇಶದವರಿಗೆ 1,20,000 ರೂ.ಗಳೊಳಗಿರಬೇಕುಮತ್ತು ಅರ್ಜಿದಾರರ ವಯಸ್ಸು 18 ರಿಂದ 55ರೊಳಗಿರಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯ ಫಲಾನುಭವಿಗಳಾಗಿದ್ದಲ್ಲಿ ಅಂತಹವರು/ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವಂತಿಲ್ಲ.

ಆಸಕ್ತರು ಉಚಿತ ಅರ್ಜಿಯನ್ನು ಜಿಲ್ಲಾ ಕಚೇರಿ ಅಥವಾ ನಿಗಮದ ವೆಬ್‌ಸೈಟ್ನಲ್ಲಿ ಪಡೆಯಬಹುದು. ಅರ್ಜಿಗಳನ್ನು ಸೂಕ್ತ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ (ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್)ಗೆ 2022ರ ಜನವರಿ 10ರೊಳಗೆ ಸಲ್ಲಿಸಬಹುದು. ಮಾಹಿತಿಗಾಗಿ ನಿಗಮದ ದೂ.ಸಂ: 080-22374832/080-29506174/5ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News