ವಿಧಾನ ಪರಿಷತ್ ಚುನಾವಣೆ: ಬಿಜೆಪಿಗೆ ಜೆಡಿಎಸ್ ಬೆಂಬಲ ಕೊಟ್ಟರೂ ಕಾಂಗ್ರೆಸ್ ಗೆ ಏನೂ ತೊಂದರೆ ಇಲ್ಲ; ಸಿದ್ದರಾಮಯ್ಯ

Update: 2021-11-29 16:11 GMT

ಮೈಸೂರು: 'ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿಗೆ ಬೆಂಬಲ ಕೊಟ್ಟರೂ ನಮಗೆ ಏನು ತೊಂದರೆಯಾಗುವುದಿಲ್ಲ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ವಿಧಾನ ಪರಿಷತ್ ಚುನಾವಣೆಯಲ್ಲಿ ಒಟ್ಟು 25 ಸ್ಥಾನಗಳಲ್ಲಿ ಕಾಂಗ್ರೆಸ್ 20 ಸ್ಥಾನಗಳಿಗೆ ಸ್ಪರ್ಧೆ ಮಾಡಿದೆ. ಇದರಲ್ಲಿ 15 ಸ್ಥಾನಗಳಲ್ಲಿ ಗೆಲ್ಲುತ್ತೇವೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

''ಬಿಜೆಪಿ ಜೆಡಿಎಸ್ ನವರದು ಹಿಂದಿನಿಂದಲೂ ಒಳ ಒಪ್ಪಂದ ಇದ್ದೇ ಇದೆ. ಇದೇನು ಹೊಸದಲ್ಲ''  ಎಂದು ಸಿದ್ದರಾಮಯ್ಯ ಕಿಡಿಕಾರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News