ಅಧೀನ ಕಾರ್ಯದರ್ಶಿ ವೃಂದದ ಅಧಿಕಾರಿಗಳಿಗೆ ಭಡ್ತಿ

Update: 2021-11-29 16:38 GMT

ಬೆಂಗಳೂರು, ನ.29: ರಾಜ್ಯದ 6 ಅಧೀನ ಕಾರ್ಯದರ್ಶಿ ವೃಂದದ ಅಧಿಕಾರಿಗಳಿಗೆ ಭಡ್ತಿ ನೀಡಲಾಗಿದ್ದು, ಇಲಾಖೆ/ಹುದ್ದೆಗಳಿಗೆ ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. 

ವಸಂತ ಕುಮಾರ-ಆಂತರಿಕ ಆರ್ಥಿಕ ಸಲಹೆಗಾರರು ಹಾಗೂ ಪದನಿಮಿತ್ತ ಸರಕಾರದ ಉಪ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮುಂಭಡ್ತಿ ನೀಡಲಾಗಿದೆ. 

ಡಿ.ಮೇರಿ ವೆಲಾಂಗನಿ-ಸರಕಾರದ ಉಪ ಕಾರ್ಯದರ್ಶಿ, ಕೃಷಿ ಇಲಾಖೆ, ಗಾಯಿತ್ರಿ ಎಲ್.,-ಸರಕಾರದ ಉಪ ಕಾರ್ಯದರ್ಶಿ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಶಂಕರ್ ಎಸ್.ವಿ.,-ಸರಕಾರದ ಉಪ ಕಾರ್ಯದರ್ಶಿ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಗೆ ಮುಂಭಡ್ತಿ ನೀಡಿ ಅಧಿಸೂಚನೆ ಹೊರಡಿಸಲಾಗಿದೆ. 

ಭಾಗ್ಯ ಬಿ.ಎನ್.,-ಸರಕಾರದ ಉಪ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಯಲ್ಲಪ್ಪ ಶಿವಶಂಕರ-ಸರಕಾರದ ಉಪ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆಗೆ ಮುಂಭಡ್ತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.   
     

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News