ನ.30 ರಿಂದ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ ಕಾರ್ಯಕ್ರಮ
Update: 2021-11-29 16:39 GMT
ಉಡುಪಿ, ನ.29: ವಾರಂಬಳ್ಳಿ ಗ್ರಾಮ ಪಂಚಾಯತ್ ಹಾಗೂ ಬ್ರಹ್ಮಾವರ ಪಶುಸಂಗೋಪನಾ ಇಲಾಖೆಯ ಸಹಯೋಗದೊಂದಿಗೆ ಗ್ರಾಪಂ ವ್ಯಾಪ್ತಿಯಲ್ಲಿ ಬೀದಿ ನಾಯಿಗಳು ಹೆಚ್ಚಾಗದಂತೆ ಹಾಗೂ ರೇಬೀಸ್ ಹರಡದಂತೆ ತಡೆಯಲು ಬೀದಿನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಕಾರ್ಯಕ್ರಮ ಹಾಗೂ ರೇಬೀಸ್ ರೋಗ ನಿರೋಧಕ ಲಸಿಕಾ ಶಿಬಿರವನ್ನು ಬ್ರಹ್ಮಾವರ ಪಶು ಆಸ್ಪತ್ರೆಯಲ್ಲಿ ನ.30 ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.