3ನೆ ಹಂತದ ಸ್ವಚ್ಛ ಕಡಲ ತೀರ ಹಸಿರು ಕೋಡಿ ಅಭಿಯಾನ

Update: 2021-11-29 16:45 GMT

ಉಡುಪಿ, ನ.29: ಬ್ಯಾರೀಸ್ ವಿದ್ಯಾ ಸಂಸ್ಥೆಗಳು, ಕುಂದಾಪುರ ಪುರಸಭೆ ಮತ್ತು ಕೋಡಿ ಮಹಾಜನರ ಸಹಯೋಗದೊಂದಿಗೆ ಸ್ವಚ್ಛ ಕಡಲ ತೀರ ಹಸಿರು ಕೋಡಿ ಅಭಿಯಾನದ ಮೂರನೆಯ ಹಂತದ ಕಾರ್ಯಕ್ರಮ ರವಿವಾರ ನಡೆಯಿತು.

ಹಳೆ ಅಳಿವೆಯಿಂದ ಕೋಡಿಯ ಸೀ ವಾಕ್‌ವರೆಗಿನ 4 ಕಿಲೋ ಮೀಟರ್ ದೂರದ ಕಡಲ ತೀರ ಹಾಗೂ ತೀರದ ಪಕ್ಕದಲ್ಲಿರುವ ರಸ್ತೆಯನ್ನು ಸ್ವಚ್ಛಗೊಳಿಸಲಾಯಿತು. ಪುರಸಭೆಯ ಸಹಕಾರದೊಂದಿಗೆ ಕಸದ ವಿಲೇವಾರಿಯನ್ನು ಮಾಡಲಾಯಿತು.

ಈ ಅಭಿಯಾನದ ನಿರಂತರ ಪ್ರಕ್ರಿಯೆಯಾಗಿ ಪ್ರತಿ ತಿಂಗಳ ಕೊನೆಯ ರವಿವಾರ ನಡೆಸಲಾಗುವುದು ಮತ್ತು ವಿವಿಧ ಸಂಘಟನೆ ಗಳು ಮತ್ತು ಸಾರ್ವಜನಿಕರ ಪಾಲ್ಗೊಳ್ಳುವಿಕೆಯಿಂದ ಈ ಕಾರ್ಯವನ್ನು ಕುಂದಾಪುರ ಜನರ ಆದ್ಯತೆ ಹಾಗೂ ಆಶಯವಾಗಿ ರೂಪಿಸಲಾಗುವುದು ಎಂದು ಬ್ಯಾರೀಸ್ ಗ್ರೂಪಿನ ಅಧ್ಯಕ್ಷ ಸಯ್ಯದ್ ಮೊಹಮ್ಮದ್ ಬ್ಯಾರಿ ಆಶಯ ವ್ಯಕ್ತಪಡಿಸಿದರು.

ಬ್ಯಾರೀಸ್ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರು, ಕುಂದಾಪುರ ಪುರಸಭೆಯ ಸದಸ್ಯರುಗಳು, ಶಿಕ್ಷಕರು, ವಿದ್ಯಾರ್ಥಿಗಳು ವಿವಿಧ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News