ಹಾಸನ: ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾರಾಮರಿ

Update: 2021-11-30 10:44 GMT

ಹಾಸನ: ಮೂಲ ಬಿಜೆಪಿ ಹಾಗೂ ವಲಸಿಗ ಬಿಜೆಪಿ ನಡುವೆ  ಮಾರಾಮರಿ ನಡೆದು ಆರೆಸ್ಸೆಸ್ ಕಾರ್ಯಕರ್ತನೊಬ್ಬ ಗಾಯಗೊಂಡಿದ್ದಾನೆ.

ಅರಸೀಕೆರೆ ವೀರಶೈವ ಕಲ್ಯಾಣ ಮಂಟಪದಲ್ಲಿ ಎಂಎಲ್ಸಿ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ 

ಜೆಡಿಎಸ್-ಕಾಂಗ್ರೆಸ್ ಪಕ್ಷದವರನ್ನು ಪಕ್ಷಕ್ಕೆ ಸೇರ್ಪಡೆ ಗೊಳಿಸುವ ಸಂದರ್ಭದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಆರೆಸ್ಸೆಸ್  ಮೂಲದ ಬಿಜೆಪಿ ಕಾರ್ಯಕರ್ತನಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ. 

ಕಾರ್ಯಕ್ರಮದ ಅಂತ್ಯದಲ್ಲಿ ಮಾರಾಮರಿ ನಡೆದಿದ್ದು, ಹಲವರಿಗೆ ಗಾಯಗಳಾಗಿವೆ. ವ್ಯಕ್ತಿಯೊಬ್ಬ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ ಎಂದು ತಿಳಿದು ಬಂದಿದೆ.

ಈ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿ ಗೋಪಾಲಯ್ಯ, ಎಂಎಲ್ಸಿ ಅಭ್ಯರ್ಥಿ ಹೆಚ್ ಎಂ ವಿಶ್ವನಾಥ್ ಸೇರಿದಂತೆ ಪಕ್ಷದ ಪ್ರಮುಖರು ಹಾಜರಿದ್ದರೂ ಮಾರಾಮಾರಿ ತಡೆಯಲು ಪಕ್ಷದ ಮುಖಂಡರು ಶತಾಯಗತಾಯ ಪ್ರಯತ್ನ ಪಟ್ಟರು ಸಫಲವಾಗಲಿಲ್ಲ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News