ಕುಂದಾಪುರ : ಆಟೋ ಪಾರ್ಕಿಂಗ್ ಗೆ ನುಗ್ಗಿದ ಟಿಪ್ಪರ್; ನಾಲ್ಕು ರಿಕ್ಷಾಗಳು ಜಖಂ

Update: 2021-11-30 12:07 GMT

ಕುಂದಾಪುರ : ಆಟೋ ರಿಕ್ಷಾ ಪಾರ್ಕಿಂಗ್ ಗೆ ಟಿಪ್ಪರ್ ನುಗ್ಗಿದ ಪರಿಣಾಮ ನಾಲ್ಕು ಆಟೋಗಳು ಜಖಂ ಆದ ಘಟನೆ ಮಂಗಳವಾರ ಮಧ್ಯಾಹ್ನ ಉಡುಪಿ ಜಿಲ್ಲೆ ತ್ರಾಸಿ ಸಮೀಪದ ಮುಳ್ಳಿಕಟ್ಟೆ ಕ್ರಾಸ್ ಬಳಿ ನಡೆದಿದೆ.

ಕುಂದಾಪುರ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಟಿಪ್ಪರ್ ಮುಳ್ಳಿಕಟ್ಟೆ ಕ್ರಾಸ್ ಬಳಿ ತಿರುವು ತೆಗೆದುಕೊಂಡ ವೇಳೆ ನಿಯಂತ್ರಣ ತಪ್ಪಿದ ಟಿಪ್ಪರ್ ಬದಿಯಲ್ಲಿರುವ ಆಟೋ ಸ್ಟ್ಯಾಂಡ್ ಒಳಕ್ಕೆ ನುಗ್ಗಿದೆ. ಪರಿಣಾಮ ಪಾರ್ಕಿಂಗ್ ನಲ್ಲಿದ್ದ 4 ಆಟೋಗಳು ನಜ್ಜುಗುಜ್ಜಾಗಿವೆ. ಆಟೋ ಚಾಲಕರು ಅಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಟಿಪ್ಪರ್ ಚಾಲಕನ ಅಜಾಗರುಕತೆ, ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನ ಕಾರಣ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News