ಕಂದಾವರ ಗ್ರಾಪಂ ಅಧ್ಯಕ್ಷ-ಪಿಡಿಒ ಪರಸ್ಪರ ಹಲ್ಲೆ ಆರೋಪ: ದೂರು

Update: 2021-11-30 13:58 GMT
ಸಾಂದರ್ಭಿಕ ಚಿತ್ರ

ಮಂಗಳೂರು, ನ.30: ಕಂದಾವರ ಗ್ರಾಪಂ ಅಧ್ಯಕ್ಷ ಮತ್ತು ಪಿಡಿಒ ಅವರು ಗ್ರಾಪಂ ಕಚೇರಿಯಲ್ಲೇ ಪರಸ್ಪರ ಹಲ್ಲೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ಗ್ರಾಪಂ ಅಧ್ಯಕ್ಷ ಉಮೇಶ್ ಮೂಲ್ಯ ಹಾಗೂ ಪಿಡಿಒ ಯಶವಂತ ಬೆಳ್ಚಡ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಕಂದಾವರ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರು ಮಾಡುವ ನಿರ್ಣಯದ ವಿರುದ್ಧವಾಗಿ ಕೆಲಸ ಮಾಡುತ್ತಾರೆ ಎಂದು ಪಿಡಿಒ ವಿರುದ್ಧ ಅಧ್ಯಕ್ಷ ಹರಿಹಾಯ್ದಿದ್ದರು. ಕಾನೂನು ಮೀರಿ ಕೆಲಸ ಮಾಡಲು ಅಸಾಧ್ಯ ಎಂದು ಪಿಡಿಒ ಪ್ರತಿ ಮಾತು ಹೇಳಿದ್ದರು. ಇದರಿಂದ ಇಬ್ಬರಲ್ಲಿ ಮಾತಿನ ಚಕಮಕಿ ನಡೆದು ಹೊಡೆದಾಡಿಕೊಂಡರು ಎಂಬ ಆರೋಪ ವ್ಯಕ್ತವಾಗಿದೆ.

ಪಿಡಿಒ ತನ್ನ ಮುಖಕ್ಕೆ ಹಲ್ಲೆ ನಡೆಸಿದ್ದಾಗಿ ಅಧ್ಯಕ್ಷ ಉಮೇಶ್ ಮೂಲ್ಯ ದೂರಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧ್ಯಕ್ಷರೇ ನನ್ನ ಮೇಲೆ ಹಲ್ಲೆ ನಡೆಸಿದ್ದಾಗಿ ಪಿಡಿಒ ಆರೋಪಿಸಿ ಆಸ್ಪತೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News