ತೀರ್ಥಹಳ್ಳಿ: ದನ ಸಾಗಾಟ ತಡೆಯಲೆತ್ನಿಸಿದವರ ಮೇಲೆ ವಾಹನ ಹರಿಸಿದ ಆರೋಪ; ಇಬ್ಬರಿಗೆ ಗಂಭೀರ ಗಾಯ

Update: 2021-11-30 14:23 GMT

ಶಿವಮೊಗ್ಗ,ನ.30: ತೀರ್ಥಹಳ್ಳಿ ತಾಲೂಕಿನ  ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ದನಗಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್ ಅಪ್ ವ್ಯಾನ್ ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ನಡೆದಿದೆ.

ಮೇಳಿಗೆಯಿಂದ ಹಿಂಬಾಲಿಸಿದ ಯುವಕರ ಮೇಲೆ ಬೆಜ್ಜವಳ್ಳಿಯಲ್ಲಿ ಪಿಕ್ ಹತ್ತಿಸಲಾಗಿದೆ ಎಂದು ಆರೋಪಿಸಲಾಗಿದೆ. 

ಸಹೋದರರಾದ ಕಿರಣ್(23), ಚರಣ್(24) ಗಂಭೀರ ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ತಾಲೂಕಿನ ಕಿತ್ತನಗದ್ದೆ ಮಂಜುನಾಥ್ ಅವರ ಪುತ್ರರು. ಘಟನೆ ನಡೆದ ಬಳಿಕ ಆಸ್ಪತ್ರೆಯ ಮುಂದೆ ನೂರಾರು ಜನ ಸೇರಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ.

ಅಕ್ರಮ ಗೋ ಸಾಗಣೆ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು.ಇಬ್ಬರು ಯುವಕರ ಚಿಕಿತ್ಸೆಗೆ ಮಣಿಪಾಲದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆರೋಪಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು

-ಜ್ಞಾನೇಂದ್ರ ,ಗೃಹ ಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News