ನ್ಯಾಯಾಲಯಕ್ಕೆ ಹಾಜರಾದ ಗೌರಿ ಲಂಕೇಶ್ ಹತ್ಯೆ ಆರೋಪಿಗಳು

Update: 2021-12-01 11:43 GMT

ಹುಬ್ಬಳ್ಳಿ, ಡಿ.1: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಬೈಕ್ ಕಳ್ಳತನ ಆರೋಪದ ವಿಚಾರಣೆಗಾಗಿ ಪೊಲೀಸರು ಹುಬ್ಬಳ್ಳಿ 1ನೆ ಜೆಎಂಎಫ್‍ಸಿ ಕೋರ್ಟ್‍ಗೆ ಹಾಜರುಪಡಿಸಿದರು. 

ಮುಂಬೈ ಜೈಲಿನಿಂದ ಬಾಡಿ ವಾರಂಟ್ ಮೇಲೆ ಹುಬ್ಬಳ್ಳಿಗೆ ಕರೆ ತಂದಿದ್ದ ಗ್ರಾಮೀಣ ಠಾಣೆ ಪೊಲೀಸರು, ವಿಚಾರಣೆ ಮುಗಿದ ನಂತರ ಬೈಕ್ ಮಹಜರು ನಡೆಸಲು ಠಾಣೆಗೆ ಕರೆದೊಯ್ದರು. ಗೌರಿ ಹತ್ಯೆ ಪ್ರಕರಣದಲ್ಲಿ ಬೈಕ್ ಬಳಸಲಾಗಿತ್ತು. ಆ ಬೈಕ್ ಹುಬ್ಬಳ್ಳಿ ತಾಲೂಕಿನ ಮಾವನೂರಲ್ಲಿ ಕಳ್ಳತನ ಮಾಡಲಾಗಿತ್ತು. 

ಈ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇದೀಗ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News