ಉಪ್ಪಿನಂಗಡಿ: ಮನೆಗೆ ನುಗ್ಗಿ ನಗ-ನಗದು ಕಳವು

Update: 2021-12-01 16:51 GMT

ಉಪ್ಪಿನಂಗಡಿ: ಮನೆ ಮಂದಿ ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಮನೆಯಲ್ಲಿದ್ದ ನಗ ನಗದನ್ನು ದೋಚಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಉರುವಾಲು ಪದವು ಎಂಬಲ್ಲಿ ನಡೆದಿದೆ.

ಉರುವಾಲು ಪದವು ನಿವಾಸಿ ಹಮೀದ್ ಎಂಬವರು ತನ್ನ ಪತ್ನಿ ಮಕ್ಕಳೊಂದಿಗೆ ನೆಲ್ಯಾಡಿಯಲ್ಲಿರುವ ತನ್ನ ಮಗಳ ಮನೆಗೆ ಹೋಗಿದ್ದ  ವೇಳೆ ಈ ಕೃತ್ಯ ನಡೆದಿದ್ದು, ಕಳ್ಳರು ಮನೆಯೊಳಗಿದ್ದ ಕವಾಟಿನ  ಬೀಗ ಮುರಿದು ನೆಕ್ಲೇಸ್,  ಎರಡು ಉಂಗುರ ಸೇರಿದಂತೆ ಆರು ಪವನ್ ತೂಕದ ಚಿನ್ನಾಭರಣವನ್ನು  ಹಾಗೂ ಸ್ವಲ್ಪ ನಗದು ಹಣವನ್ನು ಕದ್ದೊಯಿದ್ದಾರೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News