ರಾಜ್ಯ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ: ಅಧ್ಯಯನಕ್ಕೆ ಸಮಿತಿ ರಚನೆ

Update: 2021-12-01 17:46 GMT

ಬೆಂಗಳೂರು, ಡಿ. 1: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಸೇರಿದಂತೆ ರಾಜ್ಯ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಡೀಕರಣಗಳ ಕುರಿತು ಸಂಪೂರ್ಣ ಅಧ್ಯಯನ ನಡೆಸಿ ಮೂರು ತಿಂಗಳೊಳಗೆ ವರದಿಯನ್ನು ಸಲ್ಲಿಸಲು ಸಮಿತಿಯೊಂದನ್ನು ರಚಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚನೆ ಮಾಡಿದ್ದು, ಸಾರಿಗೆ ಸಂಸ್ಥೆಗಳ ಪುನರ್ ರಚನೆ, ಸಂಸ್ಥೆಯ ಆಸ್ತಿ ನಿರ್ವಹಣೆ, ಆರ್ಥಿಕ ಸ್ವಾವಲಂಬನೆ, ಸಂಪನ್ಮೂಲ ಕ್ರೋಡೀಕರಣ, ಸಾರಿಗೆ ಕ್ಷೇತ್ರದ ಕಾರ್ಯಕ್ಷಮತೆ ಹೆಚ್ಚಿಸುವ ನಿಟ್ಟಿನಲ್ಲಿ ಸಮಿತಿ ಗುರುತಿಸುವ ಇತರೆ ಯಾವುದೇ ಅಂಶಗಳನ್ನು ಒಳಗೊಂಡು ಅಧ್ಯಯನ ನಡೆಸಬಹುದಾಗಿದೆ ಎಂದು ಸಾರಿಗೆ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಪುಷ್ಪಾ ವಿ.ಎನ್. ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News