ಬೆಳ್ತಂಗಡಿ: ಕಾರ್ಮಿಕ ನೇಣುಬಿಗಿದು ಆತ್ಮಹತ್ಯೆ

Update: 2022-06-19 04:51 GMT

ಬೆಳ್ತಂಗಡಿ, ಡಿ.2: ಬಂಗಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಬಿಹಾರ ಮೂಲದ ಕಾರ್ಮಿಕರೊಬ್ಬರು ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.1ರಂದು ರಾತ್ರಿ ನಡೆದಿರುವುದು ವರದಿಯಾಗಿದೆ.

ಬಿಹಾರ ಮೂಲದ  ಚಂದನ್(35) ಆತ್ಮಹತ್ಯೆ ಮಾಡಿಕೊಂಡವರು.

ಹಲವು ವರ್ಷಗಳ ಹಿಂದೆ ಬಂಗಾಡಿ ಪರಿಸರದಲ್ಲಿ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಚಂದನ್ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದು, ಬಳಿಕ ತನ್ನ ಊರಿಗೆ ತೆರಳಿದ್ದರು. ಸುಮಾರು 10 ತಿಂಗಳ ಹಿಂದೆ ಇವರು ಪತ್ನಿ ಮತ್ತು ಮಕ್ಕಳನ್ನು ತನ್ನೂರಿನಲ್ಲಿ ಬಿಟ್ಟು, ಬಂಗಾಡಿಗೆ ಮರಳಿ ಬಂದಿದ್ದರು. ಬಳಿಕ ಬಂಗಾಡಿಯ ಕಾಂಟ್ರಾಕ್ಟುದಾರರೊಂದಿಗೆ ಸೆಂಟ್ರಿಂಗ್ ಕೆಲಸವನ್ನು ನಿರ್ವಹಿಸುತ್ತಿದ್ದು, ಅವರ ಬಾಡಿಗೆ ಮನೆಯಲ್ಲೇ ವಾಸಿಸುತ್ತಿದ್ದರು. ಡಿ.1ರಂದು ಕೂಡ ಸೆಂಟ್ರಿಂಗ್ ಕೆಲಸ ನಿರ್ವಹಿಸಿದ್ದ ಚಂದನ್ ಅಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News