ಆದಿವಾಸಿ ಯುವಕನ ಮೇಲೆ ಗುಂಡೇಟು ಪ್ರಕರಣ: ತನಿಖೆಗೆ ನಟ ಚೇತನ್ ಒತ್ತಾಯ

Update: 2021-12-02 10:48 GMT

ಮೈಸೂರು,ಡಿ.2: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟು ಜೇನು ಕುರುಬರ ಹಾಡಿ ನಿವಾಸಿ ಬಸವ ಎಂಬುವವರನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ ಆರೋಪ ಪ್ರಕರಣ ಸಂಬಂಧ ಘಟನೆಯನ್ನು ನಟ ಚೇತನ್ ಖಂಡಿಸಿದ್ದಾರೆ.

ಈ ಸಂಬಂಂಧ ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೆಷ್ಠಿ ಮಾತನಾಡಿದ ನಟ ಚೇತನ್ ಹಾಗೂ ಇತರ ಪ್ರಮುಖರು ಸುದ್ದಿಗೋಷ್ಠಿಯಲ್ಲಿ  ಅಸಮಾಧಾನ ವ್ಯಕ್ತಪಡಿಸಿದರ. ನಟ ಚೇತನ್ ಮಾತನಾಡಿ, ಆದಿವಾಸಿಗಳು ಅರಣ್ಯದ ಮೂಲ ನಿವಾಸಿಗಳು.ಅವರ ಸಂಸ್ಕೃತಿ ಪರಂಪರೆಯನ್ನು ರಕ್ಷಿಸಬೇಕಾಗಿದೆ. ಆದರೆ ಅವರ ಮೇಲೆ ನಿರಂತರ ಶೋಷಣೆ ನಡೆಯುತ್ತಿರುವುದು ಸರಿಯಲ್ಲ. ಆದಿವಾಸಿ ಸಮುದಾಯದ ವ್ಯಕ್ತಿಯ ಮೇಲೆ ಗುಂಡು ಹಾರಿಸಿರುವುದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಅರಣ್ಯದ ಮೂಲ ನಿವಾಸಿಗಳಿಗೆ ಸೂಕ್ತ ರಕ್ಷಣೆ ನೀಡಿ ಅವರ ಹಕ್ಕುಗಳನ್ನು ರಕ್ಷಣೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯ ಆಗಿದೆ. ಆದಿವಾಸಿಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ನಿಲ್ಲಬೇಕು. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಈ ಮೂರು ಪಕ್ಷಗಳು ಆದಿವಾಸಿಗಳನ್ನು ಕಡೆಗಣಿಸುತ್ತಾ ಬಂದಿವೆ ಎಂದು ನಟ ಚೇತನ್  ವಾಗ್ದಾಳಿ ನಡೆಸಿದರು.

ಗ್ರೀನ್ ಇಂಡಿಯಾ ಟ್ರೈಬಲ್ಸ್ ಸಂಸ್ಥೆಯ ಸಂಸ್ಥಾಪಕ ಡಾ ಮಹೇಂದ್ರ ಕುಮಾರ್, ಪ್ರಕರಣ ಕುರಿತು ಸೂಕ್ತ ತನಿಖೆಯಾಗಬೇಕು. ನಮ್ಮ ದೇಶದಲ್ಲಿ ಜನ ಸಾಮಾನ್ಯರಿಗೆ ಕಾನೂನುಗಳು ಇಲ್ಲವೇ.? ಬಸವ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಆದರೆ ಆತನ ಮೇಲೆ ಗುಂಡು ಹಾರಿಸಿರುವುದು ಎಷ್ಟರ ಮಟ್ಟಿಗೆ ಸರಿ. ಹಾಡಿ ನಿವಾಸಿಗಳು ಅಮಾಯಕರು. ಅವರಿಗೆ ಕಾನೂನಿನ ಬಗ್ಗೆ ಅರಿವಿಲ್ಲ. ಹಾಗಾಗಿ ನಾವು ದೂರು ನೀಡುತ್ತೇವೆ. ತಪ್ಪಿತಸ್ಥರ ವಿರುದ್ಧ ಎಫ್‍ಐಆರ್ ದಾಖಲಿಸಬೇಕೆಂದು ಒತ್ತಾಯಿಸುತ್ತೇವೆ. ಈ ಸಂಬಂಧ ಮೈಸೂರು ಜಿಲ್ಲಾಧಿಕಾರಿಗೂ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News