ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧರ್ಮಸ್ಥಳಕ್ಕೆ ಭೇಟಿ

Update: 2021-12-02 15:42 GMT

ಬೆಳ್ತಂಗಡಿ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಅವರನ್ನು ಸ್ವಾಗತಿಸಲಾಯಿತು.

ದರ್ಶನದ ಬಳಿಕ ರಾಜ್ಯಪಾಲರು ಅನ್ನಪೂರ್ಣ ಭೋಜನಾಲಯವನ್ನು ವೀಕ್ಷಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಪಾಲರಿಗೆ ಮಾಹಿತಿ ನೀಡಿದರು. ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

ರಾಜ್ಯಪಾಲರು ಮಂಜೂಷಾ ವಸ್ತು ಸಂಗ್ರಹಾಲಯ ಹಾಗೂ ಕಾರ್ ಮ್ಯೂಸಿಯಂಗೂ ಭೇಟಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News