'ಒಮೈಕ್ರಾನ್' ಹಾವಳಿ: ಇಂದಿನ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ ಬೊಮ್ಮಾಯಿ

Update: 2021-12-03 06:11 GMT

ಬೆಂಗಳೂರು, ಡಿ.3: ಕೋವಿಡ್ ನ ರೂಪಾಂತರಿತ ಹೊಸ ಪ್ರಭೇದ 'ಒಮೈಕ್ರಾನ್' ಸೋಂಕಿನ ಎರಡು ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಹಿರಿಯ ಅಧಿಕಾರಿಗಳು, ಪರಿಣತರೊಂದಿಗೆ ಸಭೆ ನಡೆಸಲಿದ್ದೇವೆ. ಸಭೆಯಲ್ಲಿ ಚರ್ಚಿಸಿ ಹೊಸ ಮಾರ್ಗಸೂಚಿ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹೊಸದಿಲ್ಲಿಯಿಂದ ಇಂದು ಪೂರ್ವಾಹ್ನ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಒಮೈಕ್ರಾನ್ ಬಗ್ಗೆ ಬೇರೆ ಬೇರೆ ದೇಶಗಳಲ್ಲಿ ಯಾವ ರೀತಿಯ  ಪೊಟೊಕ್ರಾಲ್ ಅನುಸರಿಸುತ್ತಿದ್ದಾರೆ ಎಂಬುದನ್ನು ಅಧ್ಯಯನ ನಡೆಸಿ ಹೊಸ ಮಾರ್ಗಸೂಚಿ ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News