ಚಿತ್ರದುರ್ಗ; ಗ್ಯಾಸ್ ಟ್ಯಾಂಕರ್ ಢಿಕ್ಕಿ: ನಾಲ್ವರು ಸ್ಥಳದಲ್ಲೇ ಮೃತ್ಯು

Update: 2021-12-04 03:53 GMT

ಚಿತ್ರದುರ್ಗ : ಈರುಳ್ಳಿ ಸಾಗಿಸುತ್ತಿದ್ದ ಲಾರಿಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 40ರಲ್ಲಿ ನಡೆದ ಈ ಭೀಕರ ಅಪಘಾತದಲ್ಲಿ ಈರುಳ್ಳಿ ಲಾರಿಗೆ ಪಂಕ್ಚರ್ ಹಾಕುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ರೋಣ ಮೂಲದ ಲಾರಿ ಚಾಲಕ ಶರಣಪ್ಪ, ವಿಜಯಪುರ ಮೂಲದ ಲಾರಿ ಕ್ಲೀನರ್ ಸಂಜಯ್, ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ ಎಂದು ಗುರುತಿಸಲಾಗಿದೆ.

ಗದಗ ಜಿಲ್ಲೆಯ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಾಟ ಮಾಡುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News