​ಕಾರ್ಕಳ : ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ

Update: 2021-12-04 15:02 GMT

ಕಾರ್ಕಳ : ಹಿಂದುಳಿದ ವರ್ಗಗಳ ಮೋರ್ಚಾ, ಅಲ್ಪ ಸಂಖ್ಯಾತ ಮೋರ್ಚಾ ಸಹಯೋಗದೊಂದಿಗೆ ಪ್ರಸಾದ್‌ ನೇತ್ರಾಲಯ ಸೂಪರ್‌ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ. ಪಿ. ದಯಾನಂದ ಪೈ ಮತ್ತು ಸತೀಶ್‌ ಪೈ ಚಾರಿಟೇಬಲ್‌ ಟ್ರಸ್ಟ್‌, ನೇತ್ರ ಜ್ಯೋತಿ ಚಾರಿಟೇಬಲ್‌ ಟ್ರಸ್ಟ್‌ ಸಂಯುಕ್ತ ಆಶ್ರಯದಲ್ಲಿ ಡಿ. 3ರಂದು ವಿಕಾಸ ಕಚೇರಿಯಲ್ಲಿ ಉಚಿತ ಕನ್ನಡಕ ವಿತರಣೆ ನಡೆಯಿತು. ಸಚಿವ ವಿ. ಸುನಿಲ್‌ ಕುಮಾರ್ ಫಲಾನುಭವಿಗಳಿಗೆ ಕನ್ನಡಕ ವಿತರಿಸಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಜಯರಾಂ ಸಾಲ್ಯಾನ್‌, ನವೀನ್‌ ನಾಯಕ್‌, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಜೇರಾಲ್ಡ್‌ ಡಿʼಸಿಲ್ವಾ, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಡಿʼಸೋಜಾ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಮಾನಂದ ನಲ್ಲೂರು,‌ ಉಪಾಧ್ಯಕ್ಷ ಸದಾನಂದ ಸಾಲ್ಯಾನ್‌, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್‌ ಯರ್ಲಪಾಡಿ, ಕೋಶಾಧಿಕಾರಿ ಪ್ರೀತುಲ್‌ ರಾಜ್, ಕಾರ್ಯದರ್ಶಿ ಹರೀಶ್‌, ನಗರಾದ್ಯಕ್ಷೆ ಶೋಭಾ ಭಾಸ್ಕರ್‌, ಮುಡಾರು ಪಂಚಾಯತ್ ಉಪಾಧ್ಯಕ್ಷೆ ಸುಜಾತಾ ವಿಠಲ ಪೂಜಾರಿ, ಪ್ರಧಾನ ಕಾರ್ಯದರ್ಶಿ ಭಾರತಿ ಸದಾಶಿವ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News