ಲಂಚ ಸ್ವೀಕಾರ ಆರೋಪ: ಇಬ್ಬರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಎಸಿಬಿ ಬಲೆಗೆ

Update: 2021-12-04 15:28 GMT

ಚಾಮರಾಜನಗರ: ಅಂಗಡಿ ಮಾಲಕರೊಬ್ಬರಿಂದ ಜಿಎಸ್​ಟಿ ಹಣವನ್ನು ಲಂಚವಾಗಿ ಪಡೆಯುವ ವೇಳೆ ಇಬ್ಬರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.

ಚಾಮರಾಜನಗರದ ವಾಣಿಜ್ಯ ತೆರಿಗೆ ಇನ್ಸ್​ಪೆಕ್ಟರ್​ಗಳಾದ ರವಿಕುಮಾರ್ ಮತ್ತು ಅವಿನಾಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.

ಚಾಮರಾಜನಗರ ತಾಲೂಕಿನ ನಾಗವಳ್ಳಿ ಅಂಗಡಿಯೊಂದರ ಮಾಲಕ ತೌಸಿಫ್ ಎಂಬುವರಿಗೆ ಸರ್ಕಾರಕ್ಕೆ ಸಲ್ಲಬೇಕಾದ ಜಿಎಸ್​​ಟಿ ಹಣ ಕಟ್ಟದೆ ತಮಗೆ ಹಣ ನೀಡುವಂತೆ ಈ ಅಧಿಕಾರಿಗಳು ಹೇಳಿದ್ದರು. ಒಟ್ಟು 7 ಸಾವಿರ ರೂಪಾಯಿ ಲಂಚ ಪಡೆದುಕೊಂಡು ಪರಸ್ಪರ ಹಂಚಿಕೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ರವಿಕುಮಾರ್ ಬಳಿ 2 ಸಾವಿರ ರೂ. ಪತ್ತೆಯಾದರೆ, ಅವಿನಾಶ್ ಬಳಿ 5 ಸಾವಿರ ರೂ. ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇಬ್ಬರನ್ನೂ ವಶಕ್ಕೆ ಪಡೆದ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News