ರಾಜ್ಯದಲ್ಲಿಂದು 397 ಮಂದಿಗೆ ಕೊರೋನ ದೃಢ; 4 ಮಂದಿ ಮೃತ್ಯು

Update: 2021-12-04 16:59 GMT

ಬೆಂಗಳೂರು,ಡಿ.4: ರಾಜ್ಯದಲ್ಲಿ ಶನಿವಾರ 397 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 4 ಜನರು ಸೋಂಕಿಗೆ ಬಲಿಯಾಗಿದ್ದು, 277 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,97,643ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,224ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 7012ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

4 ಸೋಂಕಿತರು ಬಲಿ: ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 1, ದಕ್ಷಿಣಕನ್ನಡ 1, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 397 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 2, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 207, ಚಾಮರಾಜನಗರ 3, ಚಿಕ್ಕಮಗಳೂರು 11, ಚಿತ್ರದುರ್ಗ 3, ದಕ್ಷಿಣಕನ್ನಡ 2, ಧಾರವಾಡ 26, ಹಾಸನ 19, ಕಲಬುರಗಿ 1, ಕೊಡಗು 19, ಕೋಲಾರ 5, ಮಂಡ್ಯ 2, ಮೈಸೂರು 29, ಶಿವಮೊಗ್ಗ 19, ತುಮಕೂರು 8, ಉಡುಪಿ 8, ಉತ್ತರಕನ್ನಡ ಜಿಲ್ಲೆಯಲ್ಲಿ 7 ಪ್ರಕರಣ ಪತ್ತೆಯಾಗಿದೆ.  

ರಾಜಧಾನಿಯಲ್ಲಿ 207 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಶನಿವಾರ 207 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 12,57,242 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,343 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,35,802 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News