ಕಲಬುರಗಿ: 'ನನ್ನಿಂದ ಓದೋಕೆ ಆಗುತ್ತಿಲ್ಲ' ಎಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

Update: 2021-12-05 15:19 GMT
ಸಾಂದರ್ಭಿಕ ಚಿತ್ರ

ಕಲಬುರಗಿ: ನನ್ನಿಂದ ಓದೋಕೆ ಆಗುತ್ತಿಲ್ಲ ಅಪ್ಪ, ಅಮ್ಮ ಕ್ಷಮಿಸಿ ಬಿಡಿ’ ಎಂದು ಡೆತ್‌ನೋಟ್ ಬರೆದಿಟ್ಟು ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ನಗರದ ನಾಗನಹಳ್ಳಿ ಪೋಲಿಸ್ ತರಬೇತಿ ಕೇಂದ್ರದ ವಸತಿ ಗೃಹದಲ್ಲಿ ನಡೆದಿದೆ.

ಮಂಜುನಾಥ ಮಾರುತಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಟಿ ಗ್ರಾಮದ ಪೋಲಿಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗಾಗಿ ಈ ಯುವಕನನ್ನು ಆತನ ಪೋಷಕರು ಸೇರಿಸಿದ್ದರು. 

ತರಬೇತಿಗಾಗಿ ನಾಗನಹಳ್ಳಿ ತರಬೇತಿ ಕೇಂದ್ರದ ಅಧಿಕಾರಿಯೋರ್ವರ ಮನೆಯಲ್ಲಿದ್ದು ಓದುತ್ತಿದ್ದ ಎಂದು ತಿಳಿದುಬಂದಿದೆ. 

ತರಬೇತಿ ಕೇಂದ್ರದ ವಸತಿ ಗೃಹದಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ವಿಶ್ವವಿದ್ಯಾಲಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ನಿಖರ ಕಾರಣ ಬಗ್ಗೆ ತನಿಖೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News