ಪುತ್ತೂರು: ಯುವಕ ನಾಪತ್ತೆ

Update: 2021-12-05 16:40 GMT

ಪುತ್ತೂರು: ತಾಲೂಕಿನ ಕೆಮ್ಮಿಂಜೆ ಗ್ರಾಮದ ಮುಂಡೂರು ಎಂಬಲ್ಲಿನ ನಿವಾಸಿ ಕೂಲಿ ಕಾರ್ಮಿಕರೊಬ್ಬರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕೆಮ್ಮಿಂಜೆ ಗ್ರಾಮದ ಮುಂಡೂರು ನಿವಾಸಿ ಮೊಹಮ್ಮದ್ ಅಶ್ರಫ್(30) ಎಂಬವರು ನಾಪತ್ತೆಯಾದ ವ್ಯಕ್ತಿ.  ಅವರು ಈ ಹಿಂದೆ ಅಟೋ ಚಾಲಕರಾಗಿದ್ದು, ಪ್ರಸ್ತುತ ಸ್ಥಳೀಯವಾಗಿ ಕೂಲಿ ಕೆಲಸ ಮಾಡುತ್ತಿದ್ದರು. ಡಿ.2ರಂದು ಸಂಜೆ ಮನೆಯಿಂದ ಪೇಟೆಗೆ ಹೋಗಿ ಬರುವುದಾಗಿ ಹೋದವರು ಮತ್ತೆ ಮನೆಗೆ ಬಂದಿಲ್ಲ ಎಂದು ಮುಹಮ್ಮದ್ ಅಶ್ರಫ್ ಅವರ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೊಹಮ್ಮದ್ ಅಶ್ರಫ್ ಅವರ ಮೊಬೈಲ್ ನಂಬರ್ ಕೂಡಾ ಸ್ವಿಚ್ ಆಫ್ ಆಗಿದ್ದು ಘಟನೆಯ ಕುರಿತು ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News