ಗಾಂಧಿ ಕುರಿತು ರಾಜ್ಯ ಮಟ್ಟದ ಲೇಖನ ಸ್ಪರ್ಧೆಗೆ ಅರ್ಜಿ ಆಹ್ವಾನ

Update: 2021-12-05 18:03 GMT

ಬೆಂಗಳೂರು, ಡಿ. 5: ಗಾಂಧಿ ಶಾಂತಿ ಪ್ರತಿಷ್ಠಾನವು 2022ರ ಜ.30ರ ಸರ್ವೋದಯ ದಿನದ ಅಂಗವಾಗಿ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಲೇಖನಗಳನ್ನು ಆಹ್ವಾನಿಸಲಾಗಿದೆ. 

ಗಾಂಧಿ ಚಿಂತನೆ ಹಾಗೂ ಇಂದಿನ ಪರಿಸ್ಥಿತಿ ಮತ್ತು ಸವಾಲುಗಳ ಕುರಿತು ‘ಗಾಂಧಿಗೆ ಒಂದು ಪತ್ರ’ ಎಂಬುದು ಲೇಖನದ ವಸ್ತುವಾಗಿದ್ದು, ಸ್ಪರ್ಧೆಗಳಲ್ಲಿ 15-30 ವಯೋಮಿತಿಯ ಯುವಜನರು ಮಾತ್ರ ಸ್ವರ್ಧೆಯಲ್ಲಿ ಭಾಗವಹಿಸಬಹುದು.

ಸ್ವರ್ಧೆಗೆ ಕಳುಹಿಸುವ ಲೇಖನಗಳನ್ನು ಅಧ್ಯಕ್ಷರು, ಗಾಂಧಿ  ಶಾಂತಿ ಪ್ರತಿಷ್ಠಾನ, ಗಾಂಧಿಭವನ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001 ಈ ವಿಳಾಸಕ್ಕೆ ಡಿಸೆಂಬರ್ 31 ರೊಳಗೆ ಕಳುಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಆಸಕ್ತರು ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ 90356 18076 ಅಥವಾ 80880 13083ಕ್ಕೆ ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News