ಕಣ್ಣೂರು ನಿಲ್ದಾಣದಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ಹೃದಯಾಘಾತ
Update: 2021-12-06 06:30 GMT
ಮಂಗಳೂರು:ಕಣ್ಣೂರು ವಿಮಾನ ನಿಲ್ದಾಣದಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಯೋರ್ವರಿಗೆ ಹೃದಯಾಘಾತ ವಾಗಿದ್ದು ಏರ್ ಇಂಡಿಯಾ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಡಿ. 3ರಂದು ಕಣ್ಣೂರಿನಿಂದ ಶಾರ್ಜಾಕ್ಕೆ ಹೊರಟಿದ್ದ ವಿಮಾನದಲ್ಲಿ ಮಹಿಳೆಗೆ ಎದೆ ನೋವು ಮತ್ತು ಉಸಿರಾಟ ಸಮಸ್ಯೆ ಉಂಟಾಗಿದ್ದು, ಈ ವೇಳೆ ವಿಮಾನವನ್ನು ತುರ್ತಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಸಿ, ನಂತರ ಮಾಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಳಿಕ ವೈದ್ಯರು ಮಹಿಳೆಗೆ ಚಿಕಿತ್ಸೆ ನೀಡಿದ್ದು, ಮಹಿಳೆಯ ಸ್ಥಿತಿ ಸ್ಥಿರವಾಗದೆ. ಯಾವುದೇ ತೊಂದರೆ ಇಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಮತ್ತು ಕುಟುಂಬ ಶಾರ್ಜಾಕ್ಕೆ ಹೋಗಲು ಅದೇ ದಿನ ರಾತ್ರಿ 11ಕ್ಕೆ ಏರ್ ಪೋರ್ಟ್ ಅಧಿಕಾರಿಗಳು ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದ್ದಾರೆ.