ಉಡುಪಿ ಅಂಚೆ ವಿಭಾಗ: ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆ

Update: 2021-12-06 14:15 GMT

ಉಡುಪಿ, ಡಿ.6: ಸ್ವಚ್ಚತಾ ಪಾಕ್ಷಿಕದ ಅಂಗವಾಗಿ ಭಾರತೀಯ ಅಂಚೆ ಇಲಾಖೆಯ ಉಡುಪಿ ಅಂಚೆ ವಿಭಾಗದ ವತಿಯಿಂದ ಉಡುಪಿ ಅಂಚೆ ವಿಭಾಗೀಯ ಕಚೇರಿಯಲ್ಲಿ ಇತ್ತೀಚೆಗೆ ನಡೆದ ವಿವಿಧ ಕಾರ್ಯಕ್ರಮಗಳ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಶಾಲಾ ಮಕ್ಕಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ಹಿರಿಯಡ್ಕ ಗ್ರೀನ್ ಪಾರ್ಕ್ ಶಾಲೆಯ ದೀಪಾ ಪ್ರಥಮ, ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಅನ್ವಿತಾ ಪಿ, ದ್ವಿತೀಯ ಹಾಗೂ ಭಿತ್ತಿ ಚಿತ್ರ ವಿನ್ಯಾಸ ಸ್ಪರ್ಧೆಯಲ್ಲಿ ಸಿದ್ಧಾಪುರ ಸರಕಾರಿ ಪ್ರೌಢಶಾಲೆಯ ದೀಕ್ಷಿತಾ ನಾಯಕ್ ಪ್ರಥಮ ಮತ್ತು ವೈಷ್ಣವಿ ಶೆಟ್ಟಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಕಾಲೇಜು ವಿಭಾಗದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಕುಂದಾಪುರದ ಆರ್‌ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಂದ್ಯಾ ಕಾಮತ್ ಪ್ರಥಮ, ಬ್ರಹ್ಮಾವರ ಲಿಟ್ಲ್ ರಾಕ್ ಶಾಲೆಯ ಪ್ರತೀಕ್ಷಾ ಎಸ್. ದ್ವಿತೀಯ ಹಾಗು ಭಿತ್ತಿ ಚಿತ್ರ ವಿನ್ಯಾಸ ಸ್ಪರ್ಧೆಯಲ್ಲಿ ಉಡುಪಿ ಪೂರ್ಣ ಪ್ರಜ್ಞಾ ಕಾಲೇಜಿನ ಗಗನ್ ಜೆ.ಸುವರ್ಣ ಪ್ರಥಮ, ಆರ್ಎನ್ ಶೆಟ್ಟಿ ಕಾಲೇಜಿನ ರಕ್ಷದಾ ಗುಡಿಗಾರ್ ದ್ವೀತಿಯ ಬಹುಮಾನ ಪಡೆದಿದ್ದಾರೆ.

ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ನವೀನ್ ಚಂದರ್ ಬಹುಮಾನ ವಿತರಿಸಿದರು. ಉಡುಪಿ ಅಂಚೆ ವಿಭಾಗದ ಸಹಾಯಕ ಅಧಿೀಕ್ಷಕ ಜಯರಾಮ ಶೆಟ್ಟಿ ವಂದಿಸಿದರು.ವಿಭಾಗೀಯ ಕಚೇರಿಯ ಅಂಚೆ ಸಹಾಯಕಿ ಸವಿತಾ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News