ಸೀತಾರಾಮಾಚಾರ್ಯ

Update: 2021-12-06 16:22 GMT

ಉಡುಪಿ, ಡಿ.6: ಉಡುಪಿ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಸುದೀರ್ಘ ಅವಧಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತಿರಾಗಿರುವ ವಿದ್ವಾನ್ ಕೊರಂಗ್ರ ಪಾಡಿ ಸೀತಾರಾಮಾಚಾಯರ್(92) ಸೋಮವಾರ ನಿಧನರಾದರು.

ಕೃಷ್ಣ ಮಠದ ಆಸ್ಥಾನ ವಿದ್ವಾಂಸರಾಗಿದ್ದ ಇವರು, ಉಡುಪಿಯ ಎಲ್ಲ ಮಠ ಗಳೊಂದಿಗೆ ನಿಕಟ ಬಾಂಧವ್ಯ ಹೊಂದಿದ್ದರು. ಉಡುಪಿ ಶ್ರೀ ಕೃಷ್ಣ ಪಂಚಾಂಗಕ್ಕೆ ಮಾರ್ಗದರ್ಶಕರಾಗಿದ್ದ ಇವರು, ಪತ್ನಿ ಓರ್ವ ಪುತ್ರನನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ