ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು

Update: 2021-12-06 16:28 GMT

ಹೆಬ್ರಿ, ಡಿ.6: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ನಸುಕಿನ ವೇಳೆ ನಡೆದಿದೆ.

ಮೃತರನ್ನು ಶಿವಪುರ ಗ್ರಾಮದ ಪ್ರಕಾಶ ಎಂದು ಗುರುತಿಸಲಾಗಿದೆ. ಕೊಳಗುಡ್ಡೆ ಕಡೆಯಿಂದ ಶಿವಪುರ ಕಡೆಗೆ ಗದ್ದುಗೆ ಅಮ್ಮನವರ ದೇವಸ್ಥಾನದ ಸಮೀಪ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿಟದ್ದ ಪ್ರಕಾಶ್ ಅವರಿಗೆ ಅಪರಿಚಿತ ವಾಹನವು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಇದರಿಂದ ಗಂಭೀರ ವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News