ನಿಮ್ಮನ್ನು ನೀವು ಬದಲಿಸಿಕೊಳ್ಳಿ’:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ ಎಚ್ಚರಿಕೆ

Update: 2021-12-07 06:37 GMT

ಹೊಸದಿಲ್ಲಿ: ಬಿಜೆಪಿ ಸಂಸದರು ಸಂಸತ್ತಿನ ಅಧಿವೇಶನಗಳಿಗೆ ನಿಯಮಿತವಾಗಿ ಹಾಜರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

"ನೀವು ನಿಮ್ಮನ್ನು ಬದಲಿಸಿಕೊಳ್ಳಿ, ಬದಲಾಯಿಸಿಕೊಳ್ಳದಿದ್ದರೆ ಸರಿಯಾದ ಸಮಯದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ" ಎಂದು ಬಿಜೆಪಿ ಸಂಸದರಿಗೆ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

"ದಯವಿಟ್ಟು ಸಂಸತ್ತು ಹಾಗೂ  ಸಭೆಗಳಲ್ಲಿ ನಿಯಮಿತವಾಗಿ ಪಾಲ್ಗೊಳ್ಳಿ. ಈ ಬಗ್ಗೆ ನಿರಂತರವಾಗಿ ಒತ್ತಡ ಹೇರುವುದು ಹಾಗೂ  ನಿಮ್ಮನ್ನು  ಮಕ್ಕಳಂತೆ ನಡೆಸಿಕೊಳ್ಳುವುದು ನನಗೆ ಒಳ್ಳೆಯದಲ್ಲ. ನೀವು ನಿಮ್ಮನ್ನು ಬದಲಾಯಿಸಿಕೊಳ್ಳದಿದ್ದರೆ  ಸರಿಯಾದ ಸಮಯದಲ್ಲಿ ಬದಲಾವಣೆಗಳಾಗುತ್ತವೆ" ಎಂದು ಪ್ರಧಾನಿ ಹೇಳಿದರು. 

ಈಗ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿ  ಭಾರೀ ವಿರೋಧವನ್ನು ಎದುರಿಸುತ್ತಿರುವಾಗ ಪ್ರಧಾನಿ ಮೋದಿಯವರ ಎಚ್ಚರಿಕೆಯ ಮಾತುಗಳು ಬಂದಿವೆ.  ನಾಗಾಲ್ಯಾಂಡ್‌ನ ಮೋನ್  ಜಿಲ್ಲೆಯಲ್ಲಿ ಸೇನಾ ಕಾರ್ಯಾಚರಣೆಯ ವೇಳೆ  14 ನಾಗರಿಕರ ಭೀಕರ ಸಾವು ಸೇರಿದಂತೆ ವಿವಿಧ ವಿಷಯಗಳಲ್ಲಿ ಸರಕಾರವನ್ನು ಪ್ರತಿಪಕ್ಷಗಳು ಗುರಿ ಮಾಡುತ್ತಿವೆ.

ಈ ಅಧಿವೇಶನಕ್ಕಾಗಿ 12 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ ಮೇಲೆ ಸರಕಾರವು ವಿಪಕ್ಷಗಳಿಂದ ಆಕ್ರೋಶವನ್ನು ಎದುರಿಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News