ಪುತ್ತೂರು: ಸಕಲ ಗೌರವಗಳೊಂದಿಗೆ ಮಾಜಿ ಶಾಸಕ ಕೆ. ರಾಮ ಭಟ್ ಅಂತ್ಯ ಸಂಸ್ಕಾರ

Update: 2021-12-07 09:37 GMT

ಪುತ್ತೂರು: ಬಿಜೆಪಿಯ ಹಿರಿಯ ಮುಖಂಡ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ. ರಾಮ ಭಟ್ ಅವರ ಅಂತಿಮ ಯಾತ್ರೆಯು ಮಂಗಳವಾರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಸಕಲ ಗೌರವಗಳೊಂದಿಗೆ ನಡೆಯಿತು. ಪುತ್ತೂರು ಮಡಿವಾಳ ಕಟ್ಟೆ ಸ್ಮಶಾನದಲ್ಲಿ ಮಂಗಳವಾರ ಅಗ್ನಿಸ್ಪರ್ಷದೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಯಿತು.

ಬೆಳಗ್ಗೆ 8 ಗಂಟೆಯ ವೇಳೆಗೆ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಕೊಂಬೆಟ್ಟಿನಲ್ಲಿನ ಸ್ವಗೃಹದಿಂದ ಅವರ ಪಾರ್ಥಿವ ಶರೀರವನ್ನು ವಿವೇಕಾನಂದ ಕಾಲೇಜ್‍ಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ಅಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಯಿತು. ಹಾಗೂ ಅಲ್ಲಿ ನುಡಿ ನಮನ ಸಲ್ಲಿಸಲಾಯಿತು. ಬಳಿಕ ಬೈಪಾಸ್ ಮೂಲಕ ಪುತ್ತೂರು ನಗರರಕ್ಕೆ ಆಗಮಿಸಿ ಕೋ ಆಪರೇಟ್ ಟೌನ್ ಬ್ಯಾಕ್ ಆವರಣದಲ್ಲಿ ಬೆಳಗ್ಗೆ 9.30ರಿಂದ 11 ಗಂಟೆಯ ತನಕ ಸಾರ್ವಜನಿಕ ದರ್ಶನಕ್ಕೆ ಇರಿಸಲಾಯಿತು. ಈ ಸಂದರ್ಭದಲ್ಲಿ ಗಣ್ಯರಿಂದ ನುಡಿ ನಮನ ಸಲ್ಲಿಸಲಾಯಿತು.

ಪುಷ್ಪಾಲಂಕೃತ ವಾಹನದಲ್ಲಿ ಅಂತಿಮ ಯಾತ್ರೆ

ಪುಷ್ಪಾಲಂಕೃತ ವಾಹನದಲ್ಲಿ ರಾಮ ಭಟ್ ಅವರ ಪಾರ್ಥಿವ ಶರೀರವನ್ನು ಅವರ ನಿವಾಸದಿಂದ ವಿವೇಕಾನಂದ ಕಾಲೇಜ್ ಮತ್ತು ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ತನಕ ಸುಮಾರು 6 ಕೀಲೋ ಮೀಟರ್ ಮೆರವಣಿಗೆಯಲ್ಲಿ ಸಾಗಿಸಲಾಯಿತು. ಬಳಿಕ ರುದ್ರ ಭೂಮಿಗೆ ಕೊಂಡೊಯ್ಯಲಾಯಿತು.

ಕುಶಾಲು ತೋಪು ಹಾರಿಸಿ ಸರ್ಕಾರಿ ಗೌರವ

ಅಂತ್ಯ ಸಂಸ್ಕಾರಕ್ಕೆ ಸರ್ಕಾರಿ ಗೌರವ ಸಲ್ಲಿಸಿದರು. ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಅವರಣದಲ್ಲಿ ಪಾರ್ಥಿವ ಶರೀರವನ್ನು ಇಟ್ಟು ಪೊಲೀಸ್ ಇಲಾಖೆಯಿಂದ ಮೂರು ಸುತ್ತಿನ ಕುಶಾಲು ತೋಪು ಹಾರಿಸುವ ಮೂಲಕ ಗೌರವ ಸಲ್ಲಿಸಲಾಯಿತು.

ಗಣ್ಯರಿಂದ ಅಂತಿಮ ನಮನ

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಕೋಟ ಶ್ರೀನಿವಾಸ ಪೂಜಾರಿ, ಡಾ. ಪ್ರಭಾಕರ ಭಟ್ ಕಲ್ಲಡ್ಕ, ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕರಾದ ಶಕುಂತಳಾ ಟಿ ಶೆಟ್ಟಿ, ವಸಂತ ಬಂಗೇರಾ, ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ ಗಣೇಶ್ ಕಾರ್ಣಿಕ್, ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ವಿಎಚ್‍ಪಿ ರಾಜ್ಯ ಉಪಾಧ್ಯಕ್ಷ ಯು. ಪೂವಪ್ಪ, ಆರೆ ಎಸ್‍ಎಸ್‍ನ ಮುಖಂಡ ನಾ. ಸೀತಾರಾಮ್ ಸೇರಿದಂತೆ ಹಲವಾರು ಮುಖಂಡರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News