ಬಿ.ವೈ.ವಿಜಯೇಂದ್ರಗೆ ಸಚಿವ ಸ್ಥಾನ ನೀಡುವಂತೆ ನಾನು ಯಾವುದೇ ಸಲಹೆ ನೀಡಲ್ಲ: ಬಿ.ಎಸ್. ಯಡಿಯೂರಪ್ಪ

Update: 2021-12-07 13:15 GMT
 ಬಿ.ಎಸ್. ಯಡಿಯೂರಪ್ಪ (file photo)

ದಾವಣಗೆರೆ:  ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಎಲ್ಲಾ ಶ್ರಮ ಹಾಕಲಾಗುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಪಕ್ಷದ ಎಲ್ಲಾ ಸಚಿವರು, ಶಾಸಕರು, ಪಕ್ಷದ ಮುಖಂಡರು ಶ್ರಮಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಿರುವ ಎಲ್ಲಾ 20 ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ವೈ.ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡುವಂತೆ ನಾನು ಯಾವುದೇ ಸಲಹೆ ನೀಡಲ್ಲ. ಒತ್ತಡವೂ ಹೇರಲ್ಲ. ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದರು. 

ನಾನು ಪಕ್ಷದ ಸಂಘಟನೆಗಾಗಿ ರಾಜಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಗೆ ಬೆಂಬಲಿಸುವಂತೆ ಕೇಳಲಾಗಿದೆ. ಬೆಂಬಲಿಸುವುದು ಬಿಡುವುದು ಜೆಡಿಎಸ್ ವರಿಷ್ಠರಿಗೆ ಬಿಟ್ಟ ವಿಚಾರ. ಅಲ್ಲದೇ ಸ್ಪರ್ಧೆ ಮಾಡದ ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ. ಆದರೆ ಅವರು ಯಾವ ನಿರ್ಧಾರ ತೆಗದುಕೊಳ್ಳುತ್ತಾರೆ ಗೊತ್ತಿಲ್ಲ ಎಂದರು ಹೇಳಿದರು. 

ಈ ವೇಳೆ ಸಂಸದ ಡಾ.ಜಿ.ಎಂ.ಸಿದ್ದೇಶ್ವರ್, ಬಿ.ವೈ.ವಿಜಯೇಂದ್ರ ಇತರರು ಇದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News