ಬೆಂಗಳೂರು: ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರ ಮನೆಯಲ್ಲಿ ಕಳವು

Update: 2021-12-07 16:15 GMT
ಡಾ. ಬಿ.ಆರ್. ರವಿಕಾಂತೇಗೌಡ

ಬೆಂಗಳೂರು, ಡಿ.7: ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ಅವರ ಮನೆಯಲ್ಲಿ ವಸ್ತುಗಳು ಕಳವು ಆಗಿರುವ ಆರೋಪ ಸಂಬಂಧ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳು ಕಳವು ಆಗಿದ್ದು, ಆಯುಕ್ತರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸದಾಕೆಯೇ ಮೇಲೆಯೇ ದೂರಿನಲ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ. ಕಳ್ಳತನ ನಡೆದ ಬಳಿಕ ಮಹಿಳೆ ನಾಪತ್ತೆಯಾಗಿದ್ದು, ಈ ಸಂಬಂಧ ಮಹಿಳೆ ವಿರುದ್ಧ ದೂರು ದಾಖಲಿಸಲಾಗಿದೆ.

ಸಂಜಯನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News