ಬೆಂಗಳೂರು: ಸರಣಿ ಅಪಘಾತ; ಓರ್ವ ಮೃತ್ಯು

Update: 2021-12-07 17:18 GMT

ಬೆಂಗಳೂರು, ಡಿ.7: ವೇಗವಾಗಿ ಬಂದ ಐಷಾರಾಮಿ ಕಾರು ಮುಂದೆ ಹೋಗುತ್ತಿದ್ದ ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಹಲಸೂರು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದು, ಗಾಯಗೊಂಡ ನಾಲ್ವರನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಲಾಗಿದೆ, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಂಗಳವಾರ ಇಂದಿರಾನಗರ 80ನೆ ಅಡಿ ರಸ್ತೆಯಲ್ಲಿ ಬರುವ ತಿಪ್ಪಸಂದ್ರ ಬಳಿ ವೇಗವಾಗಿ ಕಾರು ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಮತ್ತೊಂದು ಕಾರಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮುಂದಿನ ಎರಡು ಆಟೊ ಹಾಗೂ ಒಂದು ಮಿನಿ ಲಾರಿ ಮಧ್ಯೆ ಅಪಘಾತವಾಗಿದೆ.

ಢಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಕಾರು ವೇಗವಾಗಿ ಚಲಾಯಿಸಿದ್ದೇ ಘಟನೆಗೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಇದು ನಂದಿತಾ ಚೌದರಿ ಎಂಬುವರಿಗೆ ಸೇರಿದ ಕಾರು ಎಂದು ಗೊತ್ತಾಗಿದೆ. ಹಲಸೂರು ಸಂಚಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News