ಭಟ್ಕಳ : ಸಿಮೆಂಟ್ ಮಿಕ್ಸರ್ ಲಾರಿ ಪಲ್ಟಿ; ಓರ್ವ ಮೃತ್ಯು

Update: 2021-12-08 02:21 GMT

ಭಟ್ಕಳ: ಕುಂಟುವಾಣಿ ಅರೂಕಿ ಬಳಿ ಚಾಲಕ ನಿಯಂತ್ರಣ ತಪ್ಪಿದ ಸಿಮೆಂಟ್ ಮಿಕ್ಸರ್ ಲಾರಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ವಿಜಯಪುರ ನಿವಾಸಿ ಕಿರಣ್ (21) ಮೃತ ಯುವಕ ಎಂದು ತಿಳಿದುಬಂದಿದೆ.

ವಾಹನವು ರಸ್ತೆ ಬದಿಯಿಂದ ಇಳಿಜಾರು ಪ್ರದೇಶದಲ್ಲಿ ಜಾರಿ ನಂತರ ಪಲ್ಟಿಯಾದ ಪರಿಣಾಮ ವಾಹನದಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಇಲ್ಲಿನ ಠಾಣೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News